1:02 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು

27/08/2021, 09:52

ವಿ.ಜಿ.ವೃಷಭೇಂದ್ರ  ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠ‍ಾಪಿಸಲಾಗಿದೆ ಎಂದು ಗ್ರ‍ಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ  ಗ್ರ‍ಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ  ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರ‍ಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ ಇಲ್ಲಿ ಪ್ರತಿಷ್ಠಾಪಿಸಿದ್ದಾರೆ..!?

ಎಂಬುದು ಇಡೀ ತುಪ್ಪಕ್ಕನಹಳ್ಳಿ ಗ್ರಾಮಸ್ಥರಲ್ಲಿ ಯಕ್ಷ ಪ್ರೆಶ್ನೆಯಾಗಿ ಮನೆ ಮಾಡಿದೆ. ಗೊಂಬೆ ಇರುವಲ್ಲಿಗೆ ತುಪ್ಪಕ್ಕನಹಳ್ಳಿ ಗ್ರಾಮಸ್ಥರು ತೀವ್ರ ಕುತೂಹಲ ಹಾಗೂ ದುಗುಡದೊಂದಿಗೆ, ಗುಂಪು ಗುಂಪಾಗಿ ದೌಡಾಯಿಸಿ ಗೊಂಬೆ ಯನ್ನು ಕಂಡು ಕೌತುಕ ಕಥೆಗಳನ್ನ ಎಣೆಯುತ್ತಿದ್ದಾರೆ. ಅಲ್ಲದೇ ಸುದ್ದಿ ತಿಳಿದ ನೆರೆ ಹೊರೆಯ ಗ್ರಾಮಸ್ಥರು ಗುಂಪು ಗುಂಪಾಗಿ, ಗೊಂಬೆ ಪ್ರತಿಷ್ಠಾಪಿಸಿರುವ ಸ್ಥಳಕ್ಕೆ ಮುತ್ತಿಗೆ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಈ ಗೊಂಬೆ ನೋಡುಗರಲ್ಲಿ  ಕೌತುಕ ಹಾಗೂ ದುಗುಡ ಸೃಷ್ಟಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು