7:40 PM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

18/08/2024, 19:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಂಜನಗೂಡು, ವರುಣ ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಿಳೆಯರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ್ದರು.
ಮೈಸೂರು ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಭಾವಚಿತ್ರವನ್ನು ಸುಡುವ ಮೂಲಕ ರಸ್ತೆ ತಡೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ
ಇದು ಬಿಜೆಪಿಯವರ ಪಿತೂರಿ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧವು ಇಂತಹದೇ ದೂರು ನೀಡಿದಾಗ ಏಕೆ ಕ್ರಮ ವಹಿಸಲ್ಲಿಲ್ಲ ರಾಜ್ಯಪಾಲರೇ ?ಎಂದು ಅವರ ವಿರುದ್ಧ ಗುಡುಗಿದರು.
ಖಾಸಗಿ ವ್ಯಕ್ತಿಗಳು ನೀಡಿದ ದೂರಿನ ಮೇಲೆ ಇಂತಹ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಇದರ ಹಾಗೂ ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಘಟನೆಯ ಬಗ್ಗೆ ವಿವರಿಸಿದರು.


ಮೈಸೂರು- ಊಟಿ ಹೆದ್ದಾರಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್,, ಮುಖಂಡರುಗಳಾದ ಇಂಧನ ಬಾಬು, ಕರುಳಪುರ ನಾಗರಾಜು, ನಾಗೇಶ್ ರಾಜ್, ಶಿವಣ್ಣ, ಮಂಜುನಾಥ್, ಶ್ರೀಧರ್, ಮಾರುತಿ, ಅಜ್ಗರ್, ಅಕ್ಬರ್ ಅಲಿ, ಮಾದಪ್ಪ, ಶಶಿರೇಖಾ ಕುರಿಹುಂಡಿ ರಾಜು, ಬಾಲರಾಜು, ನೀಲಿ ಸಿದ್ದು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು