4:50 PM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ: 2025 ಏಪ್ರಿಲ್ 19, 20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ

19/08/2024, 22:00

ಮಂಗಳೂರು(reporterkarnataka.com): ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ.


ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು ಎಂದು ದ.ಕ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರಾವಳಿ ಕರ್ನಾಟಕದ ಜಾನಪದ ಕ್ರೀಡೆಯನ್ನು ವಿಶ್ವ ಪಾರಂಪರಿಕ ತಾಣವಾದ ಶಿವಮೊಗ್ಗದಲ್ಲಿ ನಡೆಸಲು ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಎಲ್ಲರ ಪೂರಕ ನೆರವು ಪಡೆಯಲಾಗುವುದು. ಶಿವಮೊಗ್ಗ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬೈಂದೂರು, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಸಹಭಾಗಿತ್ವದಲ್ಲಿ ಅದ್ಧೂರಿಯಾಗಿ ಕಂಬಳ ನಡೆಸಲಾಗುವುದು ಎಂದರು.
ಕಂಬಳಕ್ಕೆ ಬೇಕಾದ ವ್ಯವಸ್ಥೆ ಬಗ್ಗೆ ನಮ್ಮ ತಂಡ ಶಿವಮೊಗ್ಗಕ್ಕೆ ತೆರಳಿ ಪರಿಶೀಲನೆ ನಡೆಸಲಿದೆ. ಅತ್ಯಂತ ಶಿಸ್ತುಬದ್ಧವಾಗಿ ನಡೆಯಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
*ಈ ಬಾರಿ 25 ಕಂಬಳ:*
ಕರಾವಳಿಯಲ್ಲಿ ಈ ಬಾರಿ 25 ಕಂಬಳ ಆಯೋಜಿಸಲು ತೀರ್ಮಾನಿಸಲಾಗಿದೆ. ದಿನಾಂಕವನ್ನೂ ನಿಗದಿ ಮಾಡಲಾಗಿದೆ ಎಂದರು.
ಕಂಬಳ ಸಮಿತಿಯ ಭಾಸ್ಕರ ಕೋಟ್ಯಾನ್, ಜಿ.ಆರ್. ಶೆಟ್ಟಿ, ಅರುಣ್ ಶೆಟ್ಟಿ, ರೋಟರಿಯ ಜಗನ್ನಾಥ್ ಕೋಟೆ, ರಾಜ್ ಗೋಪಾಲ ರೈ, ವಿಕ್ರಂ ದತ್, ಇಲಿಯಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು