11:15 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕುದ್ರೋಳಿ ಯುವಕ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ: ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ

19/08/2024, 22:30

ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘದ ವತಿಯಿಂದ ನಗರದ ಕುದ್ರೋಳಿಯಲ್ಲಿ ಸ್ವಾತಂತ್ರ ದಿನಾಚರಣೆ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪುಷ್ಪರಾಜ್ ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹೋಟೆಲ್ ಉದ್ಯಮಿಯಾದ ಕೆ. ಸುಧಾಕರ್ ಆಳ್ವ ಅವರು ಭಾಗವಹಿಸಿದರು. ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಜರುಗಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಸಂಘದ ಸದ್ಯಸರು ಹಾಗೂ ಮಹಿಳಾ ಸಮಿತಿಯ ಸದ್ಯಸರಿಗೆ ಬಹುಮಾನಗಳನ್ನು ನೀಡಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಗ್ರಾಮದ ಬೀದಿ ವ್ಯಾಪಾರಿಗಳಿಗೆ ಉದ್ಯಮಿಯಾದ ವಿವೇಕ್ ರಾಜ್ ಪೂಜಾರಿ ನೀಡಿರುವ ಕೊಡೆಗಳನ್ನು ವಿತರಣೆ ಮಾಡಲಾಯಿತು. ಸಂಘದ ಗೌರವ ಅಧ್ಯಕ್ಷ ಶಂಕರ್ ಬರ್ಕೆ, ಉಪಾಧ್ಯಕ್ಷ ರವೀಂದ್ರ ಆರ್. ಆರ್., ಕಾರ್ಯದರ್ಶಿ ರಾಜೇಶ್ ಕುದ್ರೋಳಿ, ಮಹಿಳಾ ಸಂಚಾಲಕಿತಿ ಸುಮನ್ ಸುನಿಲ್, ಸಹ ಸಂಚಾಲಕಿ ಬಾನುಮತಿ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಪುಷ್ಪರಾಜ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಶಿಲ್ಪಾ ಸನ್ಮಾನ ಪತ್ರ ವಾಚಿಸಿದರು. ಸಂಘದ ಅಧ್ಯಕ್ಷರ ಅಶೋಕ್ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಕುದ್ರೋಳಿ ವಂದಿಸಿದರು. ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು