4:33 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು