5:45 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಏರ್ಪೋರ್ಟ್‌ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ

27/08/2021, 17:23

ಮಂಗಳೂರು(reporterkarnataka.com)

ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ಪಾರ್ಕಿಂಗ್ ಸ್ಥಳದಲ್ಲಿ ಹಳದಿ ಲೋಹದ ಬಳೆಯನ್ನು ಕಂಡಿತು. ಪ್ರಾಮಾಣಿಕತೆಯೆನ್ನು ಮೆರೆದ ಅವರು ಚಿನ್ನದ ಬಳೆಯನ್ನು ಲಾಸ್ಟ್ & ಫೌಂಡ್ ಚೇಂಬರ್‌ಗೆ ನೀಡಿದ್ದಾರೆ.


ಶ್ರೀ ಪೂಜಾರಿ ಅವರ ಪ್ರಾಮಾಣಿಕತೆ ಮತ್ತು ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ ಎಂದು ಮಂಗಳೂರು ಏರ್ಪೋರ್ಟ್ ಟ್ವಿಟರ್ ಖಾತೆಯಲ್ಲಿ #gatewaystogoodness ಎನ್ನುವ ಟ್ಯಾಗ್ ಲೈನ್ ಜತೆ ಹಂಚಿಕೊಂಡಿದೆ.

ಡೊಂಬಯ್ಯ ಪೂಜಾರಿಯವರು ಮಂಗಳೂರು ತಾಲೂಕಿನ ಅದ್ಯಪಾಡಿ ಪದವಿನ ನಿವಾಯಿಸಿಯಾಗಿದ್ದು, ಹಲವು ವರ್ಷಗಳಿಂದ ಏರ್ಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು