1:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯಲ್ಲಿ ಇನ್ನು 3 ದಿನ ಕಠಿಣ ಲಾಕ್ ಡೌನ್ ನಿಯಮ ಜಾರಿ: ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

20/05/2021, 17:10

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರ ಜಿಲ್ಲೆಯಲ್ಲಿ ನಾಳೆ, ಅಂದರೆ ಮೇ 21, 2021 ಸಂಜೆ 6.00 ಗಂಟೆಯಿಂದ ಮೇ 25, 2021 ಬೆಳಿಗ್ಗೆ 6.00 ಗಂಟೆ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮಗಳು ಕಠಿಣಗೊಳಿಸಲಾಗಿದ್ದು, ಪೆಟ್ರೋಲ್, ಹಾಲು, ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ವಾಣಿಜ್ಯ ವ್ಯವಹಾರಗಳನ್ನು  ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ತಿಳಿಸಿದ್ದಾರೆ.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆಳಗ್ಗೆ 6.00 ರಿಂದ ಸಂಜೆ 6.00ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ಹೇಳಿದರು.

ಅಂಗಡಿಗಳಲ್ಲಿ ದಿನಸಿ, ತರಕಾರಿ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಮಾರಾಟಕ್ಕೆ ಈಗ ಬೆಳಿಗ್ಗೆ 6.00 ರೊಂದ 10.00ರವರೆಗೆ ಅವಕಾಶವಿತ್ತು. ಅದನ್ನು ಇನ್ನು ಮೂರು ದಿನಗಳ ಕಾಲ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಾಳೆ ಸಂಜೆವರೆಗೂ ತಮಗೆ ಅಗತ್ಯವಿರುವ ವಸ್ತುಗಳ ಖರೀದಿಯನ್ನು ಮಾಡಿ ಇಟ್ಟುಕೊಳ್ಳುವಂತೆ ಜಿಲ್ಲೆಯ ಜನತೆಗೆ ಜಿಲ್ಲಧಿಕಾರಿಗಳು ಕೋರಿದರು.

ಹೋಟೆಲ್ ನಿಂದ ಆಹಾರ ಪರ್ಸೆಲ್ ತರುವುದು ಈಗ ಜಾರಿಯಿರುವಂತೆ ಮುಂದುವರೆಯಲಿದೆ ಎಂದ ಅವರು, ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಸಂಜೆ 6.00 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಬ್ಯಾಂಕಿಂಗ್ ಕಚೇರಿಗಳೂ ಈ ಮೂರು ದಿನ ಮುಚ್ಚಿರುತ್ತವೆ. ಆದರೆ, ಎಟಿಎಂ ವ್ಯವಸ್ಥೆ ಲಭ್ಯವಿರಲಿದೆ. ಸರ್ಕಾರಿ ಕಚೇರಿಗಳು ಈಗಾಗಲೇ ಜಾರಿಯಿರುವ ನಿಯಮದಂತೆ ಕಾರ್ಯ ಮುಂದುವರೆಸಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ ಎಂದ ಅವರು ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು  ಅಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು