1:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ

27/08/2021, 20:55

ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ  ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. 

ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ಕೌತುಕವನ್ನಂತೂ ಇದು  ಸೃಷ್ಟಿ ಮಾಡಿದೆ ಎಂಬ ಮಾತು ಕೇಳಿ ಬರುತ್ತಿದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ನೇತೃತ್ವ ವಹಿಸಲಿದ್ದಾರೆ. ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು  ಡಾ. ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. 

ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ 30ರಂದು ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು