1:04 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ

27/08/2021, 20:55

ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ  ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. 

ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ಕೌತುಕವನ್ನಂತೂ ಇದು  ಸೃಷ್ಟಿ ಮಾಡಿದೆ ಎಂಬ ಮಾತು ಕೇಳಿ ಬರುತ್ತಿದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ನೇತೃತ್ವ ವಹಿಸಲಿದ್ದಾರೆ. ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು  ಡಾ. ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. 

ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ 30ರಂದು ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು