7:04 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು

21/08/2024, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಹರ್ಷವರ್ಧನ್ ಆರೋಪಿಸಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ನೀಡಿದ್ದಾರೆ.

ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶಾಸಕರಿಗೆ ರೈತರ ಬಗ್ಗೆ ಕಾಳಜಿಯೂ ಇದೆ ನುಗುಏತ ನೀರಾವರಿಗೆ ಸದ್ಯದಲ್ಲಿಯೇ ಚಾಲನೆಯನ್ನು ನೀಡುತ್ತಾರೆ ಎಂದು ಮಾಜಿ ಶಾಸಕರ ಮಾತಿಗೆ ಕಳಲೆ ತಿರುಗೇಟು ನೀಡಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು ನುಗು ಜಲಾಶಯವು ಭರ್ತಿಯಾಗಿರುವ ಹಿನ್ನೆಲೆ ನುಗು ನಾಲೆಗೆ ಬೇಕಾಗುವಷ್ಟು ನೀರನ್ನು ಜಲಾಶಯದಿಂದಲೇ ಬಿಡಲಾಗುತ್ತಿದೆ
ಒಂದು ವೇಳೆ ಮಳೆಯ ಅಭಾವದಿಂದ ಜಲಾಶಯದಲ್ಲಿ ನೀರಿನ ಕೊರತೆಯಾದಾಗ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಆದರೆ ಈಗ ಆ ಕೊರತೆ ಇಲ್ಲ. ಅಲ್ಲದೆ ಈ ಯೋಜನೆಯ ಇನ್ನೂ ಅಲ್ಪಸ್ವಲ್ಪ ಕಾಮಗಾರಿ ಬಾಕಿಯಿದ್ದು ಅದು ಮುಗಿದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಜೊತೆ ಮಾತನಾಡಿ ಇದರ ಜೊತೆಗೆ ಇನ್ನೂ ನಂಜನಗೂಡು ತಾಲೂಕಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಈ ಯೋಜನೆಯನ್ನು ಲೋಕಾರ್ಪೃಣೆಗೊಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷ ಕೆ ಮಾರುತಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡ ನಾಗೇಶ್ ರಾಜ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು