1:02 PM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ಗೆ ಎಸ್‌ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ

22/08/2024, 23:32

ಬಂಟ್ವಾಳ(reporterkarnataka.com): ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ ‘ಬಂಟ್ವಾಳ ಕಾಂಗ್ರೆಸ್‌ ‘ಗೆ ಇವತ್ತು ಎಸ್‌ಡಿಪಿಐನ ದಯೆಯಲ್ಲಿ ಬದುಕುವ ಶೋಚನೀಯ ಪರಿಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೇವಡಿ ಮಾಡಿದರು.


ಬಂಟ್ವಾಳದಲ್ಲಿ ಇಂದು ಪುರಸಭಾ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಕ್ಯಾ. ಚೌಟ ಅವರು, ಕಾಂಗ್ರೆಸ್‌ ಸಹಜವಾಗಿಯೇ ತನ್ನ ಡಿಎನ್‌ಎಗೆ ಅನುಗುಣವಾಗಿ ಎಸ್‌ಡಿಪಿ ಜತೆಗೆ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಗೆದ್ದುಕೊಂಡಿದೆ. ಆ ಮೂಲಕ ಕಾಂಗ್ರೆಸ್‌ ತಾವು ಯಾರ ಜತೆಗಿದ್ದೇವೆ ಎನ್ನುವ ಸ್ಪಷ್ಟ ಸಂದೇಶವನ್ನು ಸಮಾಜಕ್ಕೆ ರವಾನಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಸಖ್ಯ ಯಾರ ಜತೆಗಿದೆ ಎಂಬುದನ್ನು ನಾವು ಹಲವಾರು ವರ್ಷಗಳಿಂದ ಹೇಳಿಕೊಂಡು ಬಂದಿದ್ದೇವೆ. ಆದರೆ, ಬಂಟ್ವಾಳದ ಜನತೆಗೆ ಇವತ್ತು ಇದರ ಅರಿವಾಗಿದೆ. ವಿಶೇಷವಾಗಿ ಪಿಎಫ್‌ಐನ ರಾಜಕೀಯ ಸಂಸ್ಥೆಯಾಗಿರುವ ಎಸ್‌ಡಿಪಿಐ ಕಾಂಗ್ರೆಸ್‌ ಜತೆಗೆ ಖುಲ್ಲಂಖುಲ್ಲಾವಾಗಿ ಹೊಂದಾಣಿಕೆ ಮಾಡಿಕೊಂಡು ಬಂಟ್ವಾಳದ ಮಹಾಜನತೆಗೆ ಮೋಸವನ್ನು ಮಾಡಿರುವ ಕಾಂಗ್ರೆಸ್‌ಗೆ ಈ ಸಂದರ್ಭದಲ್ಲಿ ನಾನು ಏನು ಹೇಳಬೇಕೆಂದು ಗೊತ್ತಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು