7:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ

23/08/2024, 13:29

ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ ದೊಡ್ಡರಂಗೇ ಗೌಡ, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾಯಕರಾದ ವಿದ್ಯಾಭೂಷಣ ಮೊದಲಾದ ಗಣ್ಯರಿಗೆ ಈ ಹಿಂದೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಈ ಬಾರಿ ಯುವ ಪ್ರತಿಭಾನ್ವಿತ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲು ತಿಳಿಸಿದ್ದಾರೆ.
ಬೆಂಗಳೂರು ಮಾಜಿ ಮೇಯರ್ ಕಟ್ಟೆ ಸತ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೃಷ್ಟಿ ಗೌರವ ಅಧ್ಯಕ್ಷ ಶ್ರೀಕಾಂತ್ ಎಂ.ಜಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಸೃಷ್ಟಿ ಯಕ್ಷೋತ್ಸವದಲ್ಲಿ ಅಧ್ವರತ್ರಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.
*2 ದಿನ ಯಕ್ಷೋತ್ಸವ:*
ಸುಬ್ರಾಯ ಹೆಬ್ಬಾರ್ ಹಾಗೂ ಭರತ್ ರಾಜ್ ಪರ್ಕಳ ಅವರ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್ ಅವರ ವೇಷಭೂಷಣದಲ್ಲಿ
ಆ.24 ಸಂಜೆ 4 ಗಂಟೆಗೆ ದಕ್ಷಾಧ್ವರ ಹಾಗೂ 25 ಆ. ಭಾನುವಾರ ಸಂಜೆ 4 ಗಂಟೆಗೆ ಮಾರಣಾಧ್ವರ ಬಳಿಕ ರಾಜಸೂಯಾಧ್ವರ ಯಕ್ಷಗಾನ ಪ್ರದರ್ಶನ ಸೃಷ್ಟಿ ಕಲಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ನಡೆಯಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು