4:59 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ

23/08/2024, 13:29

ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ ದೊಡ್ಡರಂಗೇ ಗೌಡ, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾಯಕರಾದ ವಿದ್ಯಾಭೂಷಣ ಮೊದಲಾದ ಗಣ್ಯರಿಗೆ ಈ ಹಿಂದೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಈ ಬಾರಿ ಯುವ ಪ್ರತಿಭಾನ್ವಿತ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲು ತಿಳಿಸಿದ್ದಾರೆ.
ಬೆಂಗಳೂರು ಮಾಜಿ ಮೇಯರ್ ಕಟ್ಟೆ ಸತ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೃಷ್ಟಿ ಗೌರವ ಅಧ್ಯಕ್ಷ ಶ್ರೀಕಾಂತ್ ಎಂ.ಜಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಸೃಷ್ಟಿ ಯಕ್ಷೋತ್ಸವದಲ್ಲಿ ಅಧ್ವರತ್ರಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.
*2 ದಿನ ಯಕ್ಷೋತ್ಸವ:*
ಸುಬ್ರಾಯ ಹೆಬ್ಬಾರ್ ಹಾಗೂ ಭರತ್ ರಾಜ್ ಪರ್ಕಳ ಅವರ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್ ಅವರ ವೇಷಭೂಷಣದಲ್ಲಿ
ಆ.24 ಸಂಜೆ 4 ಗಂಟೆಗೆ ದಕ್ಷಾಧ್ವರ ಹಾಗೂ 25 ಆ. ಭಾನುವಾರ ಸಂಜೆ 4 ಗಂಟೆಗೆ ಮಾರಣಾಧ್ವರ ಬಳಿಕ ರಾಜಸೂಯಾಧ್ವರ ಯಕ್ಷಗಾನ ಪ್ರದರ್ಶನ ಸೃಷ್ಟಿ ಕಲಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ನಡೆಯಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು