10:39 AM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಕ್ವಾಂಟಮ್ ಕಂಪ್ಯೂಟಿಂಗ್ ಜ್ಞಾನದಿಂದ ಭವಿಷ್ಯದ ಸವಾಲುಗಳಿಗೆ ಉತ್ತರ: ಡಾ. ತ್ಯಾಗರಾಜು ಜಿ.ಎಸ್.

23/08/2024, 13:33

ಮಂಗಳೂರು(reporterkarnataka.com): ಇಂದಿನ ವೇಗದ ಜಗತ್ತಿನಲ್ಲಿ ‘ಕ್ವಾಂಟಮ್ ಕಂಪ್ಯೂಟಿಂಗ್’ ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು ‘ಕ್ವಾಂಟಮ್ ಕಂಪ್ಯೂಟಿಂಗ್’ನ ಮಹತ್ವ ಹೆಚ್ಚಿಸಿದೆ. ಇದರಿಂದಾಗಿ ಸಂಕೀರ್ಣ ಸಮಸ್ಯೆಗಳನ್ನೂ ತ್ವರಿತ ಹಾಗೂ ಪರಿಪಕ್ವತೆಯಿಂದ ನಿರ್ವಹಿಸಲು ಸಾಧ್ಯವಾಗಿದೆ. ಹಾಗಾಗಿಯೇ ತಾಂತ್ರಿಕ ರಂಗದ ದಿಗ್ಗಜ ಕಂಪೆನಿಗಳ ಪೈಕಿ ಗೂಗಲ್ ಕೂಡಾ ‘ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ದಿಮತ್ತೆಯ ತಂತ್ರಜ್ಞರಿಗೆ ಹೊಸತನದ ಸವಾಲುಗಳಾಗಿ ಮಣೆ ಹಾಕುತ್ತಿದೆ. ಈ ನೆಲೆಯಲ್ಲಿ ಇಂದಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಉತ್ತರಿಸಲು ಸನ್ನದ್ಧರಾಗಿಸುವ ಜವಾಬ್ದಾರಿ ನಮಗಿದೆ ಎಂದು ಉಜಿರೆ ಎಸ್‌ಡಿಎಂಐಟಿಯ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ಪ್ರಾಧ್ಯಾಪಕ , ವಿಭಾಗ ಮುಖ್ಯಸ್ಥ ಡಾ. ತ್ಯಾಗರಾಜು ಜಿ.ಎಸ್. ಹೇಳಿದರು.
ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಸಹಯೋಗದಲ್ಲಿ ಕೆನರಾ ಇಂಜಿನಿರಿಂಗ್ ಕಾಲೇಜಿನಲ್ಲಿ ಗುರುವಾರ ಇನ್ಫರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಗುರುವಾರ ‘ಕ್ವಾಂಟಮ್ ಕಂಪ್ಯೂಟಿಂಗ್’ ಕುರಿತಂತೆ ಆರಂಭಗೊಂಡ ಮೂರು ದಿನಗಳ ಬೋಧಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ನಾಗೇಶ್ ಹೆಚ್. ಆರ್. ಅಧ್ಯಕ್ಷತೆ ವಹಿಸಿದ್ದರು. ವಿಭಾಗ ಮುಖ್ಯಸ್ಥ ಡಾ. ಹೆಚ್. ಮನೋಜ್ ಗಡಿಯಾರ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಸಹ ಪ್ರಾಧ್ಯಾಪಕಿ ಡಾ. ಉಷಾ ಜಿ.ಆರ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕ ರಂಗನಾಥ್ ಕೆ. ವಂದಿಸಿದರು. ಸುಷ್ಮಾ ಎಂ.ಡಿ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನ ಕ್ವಾಂಟಮ್ ರಿಸರ್ಚ್ ಲ್ಯಾಬ್ ಸ್ಥಾಪಕ ಸಿಇಒ ದೊರೈ ಕಾರ್ತಿಗಣೇಶ್, ಮಂಗಳೂರು ಸೆವೆನ್ ಎಡ್ಜ್ ಪ್ರೈ.ಲಿ ಹಿರಿಯ ಪ್ರಬಂಧಕ ಪ್ರಶಾಂತ್ ಕುಮಾರ್ ಎ, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು