4:53 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು