5:52 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್

23/08/2024, 22:37

ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾಲು ಹಾಕಿದರು.
ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರ ಮನೆಯಿಂದ ಜಿಲ್ಲಾ ಬಿಜೆಪಿ ಕಚೇರಿವರೆಗೆ ಪಾದಯಾತ್ರೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಘೋಷಿಸಿದ್ದರಿಂದ ಶುಕ್ರವಾರ ಬೆಳಿಗ್ಗೆಯೇ ಪಿವಿಎಸ್ ಕಚೇರಿ ಬಳಿ ಬಿಜೆಪಿ ಶಾಸಕರುಗಳು, ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಇದು ಬಿಜೆಪಿ ಭದ್ರಕೋಟೆ. ಇಲ್ಲಿ ಕಾಂಗ್ರೆಸ್ಸಿನ ಪುಂಡರ ಬೆದರಿಕೆಗೆ ಜಗ್ಗುವವರು ಯಾರೂ ಇಲ್ಲ. ಇವರು ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ, ಸಾರ್ವಜನಿಕರ ಬಸ್ಸಿಗೆ ಕಲ್ಲು ಹೊಡೆದಷ್ಟು, ನಿರ್ಜೀವ ಟಯರಿಗೆ ಬೆಂಕಿ ಹಚ್ಚಿದಷ್ಟು ಸುಲಭವಲ್ಲ.ಬೇಕಿದ್ದರೆ ಒಮ್ಮೆ ಬಂದು ಪ್ರಯತ್ನಿಸಿ ನೋಡಲಿ, ವಿಶೇಷ ಚಪ್ಪಲಿಯ ಹಾರಗಳು ಅವರಿಗಾಗಿ ಸಿದ್ಧವಾಗಿವೆ ಎಂದು ಎಚ್ಚರಿಕೆ ನೀಡಿದರು.
ಮಹಿಳಾ ಮೋರ್ಚಾವೂ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಮಧ್ಯಾಹ್ನದವರೆಗೂ ಕಾದರೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಕಡೆ ಸುಳಿಯದೇ, ಕಂಕನಾಡಿವರೆಗೆ ಮಾತ್ರ ಪಾದಯಾತ್ರೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು