11:01 PM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ರಾಷ್ಟ್ರಿಯ ಲೋಕ್ ಅದಾಲತ್’ 905 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ

24/08/2024, 18:01

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 905 ಪ್ರಕರಣಗಳು ಈಗಾಗಲೇ ರಾಜಿ ಸಂಧಾನದ ಮೂಲಕ ಮುಕ್ತವಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಎರಡು
ಜಿಲ್ಲೆಗಳಲ್ಲಿ 31 ನ್ಯಾಯಾಲಯಗಳಲ್ಲಿ ಒಟ್ಟು 59434 ಪ್ರಕರಣಗಳು ಬಾಕಿ ಇದ್ದು ಅವುಗಳಲ್ಲಿ ಈಗಾಗಲೇ 4109 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಲುವಾಗಿ ಗುರಿತಿಸಲಾಗಿದೆ ಎಂದು ತಿಳಿಸಿದರು.
ಸದರಿ ಮುಕ್ತಾಯವಾದಗಳ ಪ್ರಕರಣಗಳ ಪೈಕಿ 47 ಚೆಕ್ ಬೌನ್ಸ್ ಪ್ರಕರಣಗಳು 8 ಪಾಲು ವಿಭಾಗದ, 6 ಹಣ ವಸೂಲಾತಿ 2 ಬ್ಯಾಂಕ್ ಪ್ರಕರಣಗಳು 4 ಮೋಟಾರು ವಾಹನ ಪರಿಹಾರ ಪ್ರಕರಣಗಳು 11 ಇತರೆ ಸಿವಿಲ್ ಪ್ರಕರಣಗಳು ಸೇರಿವೆ.
ಅದರಂತೆ 150 ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಅರ್ಜಿಗಳು 623 ದಂಡ ವಿಧಿಸಿದ ಮುಕ್ತಾಯಗೊಳಿಸಬಹುದಾದ ಅಪರಾಧಿ ಪ್ರಕರಣಗಳು ಇರುತ್ತವೆ.
14 ಸೆಪ್ಟೆಂಬರ್ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಈ ಹಿಂದಿನ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನ ಮೂಲಕ ಮುಕ್ತಗೊಳಿಸಿದ 1,25,442 ಪ್ರಕಣಗಳಿಗಿಂತ ಹೆಚ್ಚು ಪ್ರಕರಣಗಳನ್ನು ಈ ಬಾರಿಯ ಲೋಕ ಅದಾಲತ್ ನಲ್ಲಿ ಗುರಿ ಸಾಧಿಸುವ ಹೊಂದಿರುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು