9:19 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕಾರ್ಕಳ: ಯುವತಿ ಅಪಹರಿಸಿ ಅತ್ಯಾಚಾರ; ಇಬ್ಬರ ಬಂಧನ

24/08/2024, 23:10

ಕಾರ್ಕಳ(reporterkarnataka.com): ಸುಮಾರು 21ರ ಹರೆಯದ ಯುವತಿಯೊಬ್ಬಳ ಅಪಹರಿಸಿ, ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಲ್ತಾಫ್ (34) ಮತ್ತು ಕ್ಸೆವಿಯರ್ ರಿಚರ್ಡ್ ಕ್ವಾಡ್ರಸ್ (35) ಎಂದು ಗುರುತಿಸಲಾಗಿದೆ.
ಅತ್ಯಾಚಾರಕ್ಕೊಳಗಾದ ಯುವತಿ ಮತ್ತು ಅಲ್ತಾಫ್ ಕಳೆದ 3 ತಿಂಗಳಿಂದ ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಶುಕ್ರವಾರ ಮಧ್ಯಾಹ್ನ ಅಲ್ತಾಫ್ ಒಂದು ಕಡೆಗೆ ಬರಲು ಹೇಳಿದ್ದ. ಅಲ್ಲಿಗೆ ಹೋದ ಯುವತಿಯನ್ನು ಅಲ್ತಾಫ್ ಕಾರಿನಲ್ಲಿ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆತನ ಇಬ್ಬರು ಸ್ನೇಹಿತರು ಬಂದು ಮದ್ಯ ತಂದು ಕೊಟ್ಟರು. ನಂತರ ಅಲ್ತಾಫ್ ಮದ್ಯಕ್ಕೆ
ಏನನ್ನು ಬೆರೆಸಿ ಬಲವಂತವಾಗಿ ಯುವತಿಗೆ ಕುಡಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆಕೆಯನ್ನು ಅಲ್ತಾಫ್ ಮನೆಯ ಬಳಿ ಕಾರಿನಲ್ಲಿ ಕರೆತಂದು ಬಿಟ್ಟು ಹೋಗಿದ್ದ, ತೀವ್ರ ಅಸ್ವಸ್ಥಳಾಗಿದ್ದ ಆಕೆಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅಲ್ತಾಫ್ ನನ್ನು ಬಂಧಿಸಿ, ಯುವತಿಯ ಅಪಹರಣಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆತನಿಗೆ ಬಿಯರ್ ಬಾಟಲ್ ತಂದುಕೊಟ್ಟ ಕ್ಸೇವಿಯರ್ ನನ್ನು ಬಂಧಿಸಿ ಮತ್ತು ಆತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಡುವೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಪ್ರಕರಣದ ದೂರು ಮತ್ತು ಮೆಡಿಕಲ್ ರಿಪೋರ್ಟ್ ನಲ್ಲಿ ಇಲ್ಲದ ಮಾಹಿತಿಗಳನ್ನು ಹರಿಯ ಬಿಡಲಾಗುತ್ತಿದೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಸಾಮಾಜಿಕ ಜಾಲತಾಣಗಳ ಮೇಲೆ ಮತ್ತು ಅವುಗಳನ್ನು ವೈರಲ್ ಮಾಡುತ್ತಿರವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು