3:07 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕಾರ್ಕಳ: ಯುವತಿ ಅಪಹರಿಸಿ ಅತ್ಯಾಚಾರ; ಇಬ್ಬರ ಬಂಧನ

24/08/2024, 23:10

ಕಾರ್ಕಳ(reporterkarnataka.com): ಸುಮಾರು 21ರ ಹರೆಯದ ಯುವತಿಯೊಬ್ಬಳ ಅಪಹರಿಸಿ, ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಲ್ತಾಫ್ (34) ಮತ್ತು ಕ್ಸೆವಿಯರ್ ರಿಚರ್ಡ್ ಕ್ವಾಡ್ರಸ್ (35) ಎಂದು ಗುರುತಿಸಲಾಗಿದೆ.
ಅತ್ಯಾಚಾರಕ್ಕೊಳಗಾದ ಯುವತಿ ಮತ್ತು ಅಲ್ತಾಫ್ ಕಳೆದ 3 ತಿಂಗಳಿಂದ ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯವಾಗಿದ್ದರು. ಶುಕ್ರವಾರ ಮಧ್ಯಾಹ್ನ ಅಲ್ತಾಫ್ ಒಂದು ಕಡೆಗೆ ಬರಲು ಹೇಳಿದ್ದ. ಅಲ್ಲಿಗೆ ಹೋದ ಯುವತಿಯನ್ನು ಅಲ್ತಾಫ್ ಕಾರಿನಲ್ಲಿ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆತನ ಇಬ್ಬರು ಸ್ನೇಹಿತರು ಬಂದು ಮದ್ಯ ತಂದು ಕೊಟ್ಟರು. ನಂತರ ಅಲ್ತಾಫ್ ಮದ್ಯಕ್ಕೆ
ಏನನ್ನು ಬೆರೆಸಿ ಬಲವಂತವಾಗಿ ಯುವತಿಗೆ ಕುಡಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆಕೆಯನ್ನು ಅಲ್ತಾಫ್ ಮನೆಯ ಬಳಿ ಕಾರಿನಲ್ಲಿ ಕರೆತಂದು ಬಿಟ್ಟು ಹೋಗಿದ್ದ, ತೀವ್ರ ಅಸ್ವಸ್ಥಳಾಗಿದ್ದ ಆಕೆಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅಲ್ತಾಫ್ ನನ್ನು ಬಂಧಿಸಿ, ಯುವತಿಯ ಅಪಹರಣಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಆತನಿಗೆ ಬಿಯರ್ ಬಾಟಲ್ ತಂದುಕೊಟ್ಟ ಕ್ಸೇವಿಯರ್ ನನ್ನು ಬಂಧಿಸಿ ಮತ್ತು ಆತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಡುವೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಪ್ರಕರಣದ ದೂರು ಮತ್ತು ಮೆಡಿಕಲ್ ರಿಪೋರ್ಟ್ ನಲ್ಲಿ ಇಲ್ಲದ ಮಾಹಿತಿಗಳನ್ನು ಹರಿಯ ಬಿಡಲಾಗುತ್ತಿದೆ. ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಸಾಮಾಜಿಕ ಜಾಲತಾಣಗಳ ಮೇಲೆ ಮತ್ತು ಅವುಗಳನ್ನು ವೈರಲ್ ಮಾಡುತ್ತಿರವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು