8:58 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ

24/08/2024, 23:51

ಸಂತೋಷ್ ಬೆಳಗಾವಿ

info.reporterkarnataka@gmail.com

ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಅವರು ಹಳ್ಳೂರ 24 ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ ದರು.
ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ. ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ್ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ ವಿದ್ಯಾವಂತರಾಗಿರೆಂದು ಹೇಳಿದರು. ಪ್ರಧಾನ ಗುರುಗಳಾದ ಆರ್. ಕೆ. ಮೆಲಗಡೆ ಮಾತನಾಡಿ, ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಶಿಕ್ಷಕರಲ್ಲಿ ಏನಾದರೂ ತಪ್ಪುಗಳು ಕಂಡು ಬಂದರೆ ನಮ್ಮ ಗಮನಕ್ಕೆ ತಂದರೆ ಸರಿ ಪಡಿಸಿಕೊಳ್ಳುತ್ತೇವೆ. ಎಲ್ಲರೂ ಸೇರಿಕೊಂಡು ಶಾಲೆಗೆ ವಿದ್ಯಾರ್ಥಿಗಳ ಇನ್ನಷ್ಟು ಸಂಖ್ಯೆ ಹೆಚ್ಚಿಸಿ ಶಾಲೆಯ ಕೀರ್ತಿ ಬೆಳೆಸೋಣಾ ಎಂದು ಹೇಳಿದರು. ಬಸಲಿಂಗ ಬಾಗೋಡಿ ಮಾತನಾಡಿ ಮಕ್ಕಳಿಗೆ ದಿನಾಲು ಎಲ್ಲಾ ರೀತಿಯ ಪಾಠ ಕಲಿಸುವದರ ಜೊತೆಗೆ ಮರಳಿ ನೆನಪಿಸಿಕೊಂಡು ಮಕ್ಕಳ ತಲೆಯಲ್ಲಿ ಉಳಿಯುವ ಹಾಗೆ ಶಿಕ್ಷಣ ನೀಡಬೇಕು.ಪಾಲಕರ ಸಭೆಯು ಪ್ರತಿ ತಿಂಗಳು ಅರ್ಥ ಪೂರ್ಣವಾಗಿ ನಡೆಯಿಲಿ ಎಂದು ಹೇಳಿದರು. ಸಭೆಯಲ್ಲಿ ಮಕ್ಕಳನ್ನು ಎಬ್ಬಿಸಿ ಸರಳ ಪ್ರಶ್ನೆ ಕೇಳಿದಾಗ ಕೆಲವು ಪ್ರಶ್ನೆಗೆ ಮಾತ್ರ ಉತ್ತರವನ್ನು ನೀಡಿದರು. ಪಾಲಕರು ಮತ್ತು ಶಿಕ್ಷಕರ ಮದ್ಯೆ ಕೆಲವು ವಿಚಾರ ನಡೆದವು.
ಈ ಸಮಯದಲ್ಲಿ ಸಿದ್ದಪ್ಪ ಅಂಗಡಿ, ದುಂಡಪ್ಪ ಕೂಲಿಗೋಡ, ಲಕ್ಷ್ಮಣ ಗಲಗಲಿ, ಸಂಜು ಕೊರೆ, ಕೆಂಪವ್ವ ಅಂಗಡಿ, ಶಿಕ್ಷಕರಾದ ಬಿ. ಜೆ. ಪಾರ್ಥನಳ್ಳಿ,ರಾಮು ಹರಿಜನ, ಶೋಭಾ ಮುತಾರಿ, ಪಾಲಕರಾದ ನಾಗಪ್ಪ ಬಿಸನಾಳ, ಶಂಕರ ಮಾಲಗಾರ, ಪ್ರಕಾಶ ಲೋಕನ್ನವರ, ಪ್ರಕಾಶ ಬಾಗೋಡಿ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು