3:28 AM Monday2 - June 2025
ಬ್ರೇಕಿಂಗ್ ನ್ಯೂಸ್
ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ…

ಇತ್ತೀಚಿನ ಸುದ್ದಿ

ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ

24/08/2024, 23:51

ಸಂತೋಷ್ ಬೆಳಗಾವಿ

info.reporterkarnataka@gmail.com

ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಅವರು ಹಳ್ಳೂರ 24 ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ ದರು.
ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ. ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ್ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ ವಿದ್ಯಾವಂತರಾಗಿರೆಂದು ಹೇಳಿದರು. ಪ್ರಧಾನ ಗುರುಗಳಾದ ಆರ್. ಕೆ. ಮೆಲಗಡೆ ಮಾತನಾಡಿ, ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಶಿಕ್ಷಕರಲ್ಲಿ ಏನಾದರೂ ತಪ್ಪುಗಳು ಕಂಡು ಬಂದರೆ ನಮ್ಮ ಗಮನಕ್ಕೆ ತಂದರೆ ಸರಿ ಪಡಿಸಿಕೊಳ್ಳುತ್ತೇವೆ. ಎಲ್ಲರೂ ಸೇರಿಕೊಂಡು ಶಾಲೆಗೆ ವಿದ್ಯಾರ್ಥಿಗಳ ಇನ್ನಷ್ಟು ಸಂಖ್ಯೆ ಹೆಚ್ಚಿಸಿ ಶಾಲೆಯ ಕೀರ್ತಿ ಬೆಳೆಸೋಣಾ ಎಂದು ಹೇಳಿದರು. ಬಸಲಿಂಗ ಬಾಗೋಡಿ ಮಾತನಾಡಿ ಮಕ್ಕಳಿಗೆ ದಿನಾಲು ಎಲ್ಲಾ ರೀತಿಯ ಪಾಠ ಕಲಿಸುವದರ ಜೊತೆಗೆ ಮರಳಿ ನೆನಪಿಸಿಕೊಂಡು ಮಕ್ಕಳ ತಲೆಯಲ್ಲಿ ಉಳಿಯುವ ಹಾಗೆ ಶಿಕ್ಷಣ ನೀಡಬೇಕು.ಪಾಲಕರ ಸಭೆಯು ಪ್ರತಿ ತಿಂಗಳು ಅರ್ಥ ಪೂರ್ಣವಾಗಿ ನಡೆಯಿಲಿ ಎಂದು ಹೇಳಿದರು. ಸಭೆಯಲ್ಲಿ ಮಕ್ಕಳನ್ನು ಎಬ್ಬಿಸಿ ಸರಳ ಪ್ರಶ್ನೆ ಕೇಳಿದಾಗ ಕೆಲವು ಪ್ರಶ್ನೆಗೆ ಮಾತ್ರ ಉತ್ತರವನ್ನು ನೀಡಿದರು. ಪಾಲಕರು ಮತ್ತು ಶಿಕ್ಷಕರ ಮದ್ಯೆ ಕೆಲವು ವಿಚಾರ ನಡೆದವು.
ಈ ಸಮಯದಲ್ಲಿ ಸಿದ್ದಪ್ಪ ಅಂಗಡಿ, ದುಂಡಪ್ಪ ಕೂಲಿಗೋಡ, ಲಕ್ಷ್ಮಣ ಗಲಗಲಿ, ಸಂಜು ಕೊರೆ, ಕೆಂಪವ್ವ ಅಂಗಡಿ, ಶಿಕ್ಷಕರಾದ ಬಿ. ಜೆ. ಪಾರ್ಥನಳ್ಳಿ,ರಾಮು ಹರಿಜನ, ಶೋಭಾ ಮುತಾರಿ, ಪಾಲಕರಾದ ನಾಗಪ್ಪ ಬಿಸನಾಳ, ಶಂಕರ ಮಾಲಗಾರ, ಪ್ರಕಾಶ ಲೋಕನ್ನವರ, ಪ್ರಕಾಶ ಬಾಗೋಡಿ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು