9:09 PM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ

24/08/2024, 23:51

ಸಂತೋಷ್ ಬೆಳಗಾವಿ

info.reporterkarnataka@gmail.com

ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಅವರು ಹಳ್ಳೂರ 24 ಗ್ರಾಮದ ಶಿವಶಂಕರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆಯಲ್ಲಿ ಮಾತನಾಡಿ ದರು.
ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಿಕ್ಷಣ ಜೀವನದ ತಳಪಾಯವಿದ್ದಂತೆ. ಉನ್ನತ ಮಟ್ಟದ ಶಿಕ್ಷಣ ಕಲಿತು ಮೇಧಾವಿಗಳಾಗಿರಿ ಮೊಬೈಲ್ ಟಿವಿ ಕಡೆ ಗಮನ ಕೊಡದೆ ಹೆಚ್ಚು ಅಭ್ಯಾಸದ ಗಮನ ಹರಿಸಿ ವಿದ್ಯಾವಂತರಾಗಿರೆಂದು ಹೇಳಿದರು. ಪ್ರಧಾನ ಗುರುಗಳಾದ ಆರ್. ಕೆ. ಮೆಲಗಡೆ ಮಾತನಾಡಿ, ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಶಿಕ್ಷಕರಲ್ಲಿ ಏನಾದರೂ ತಪ್ಪುಗಳು ಕಂಡು ಬಂದರೆ ನಮ್ಮ ಗಮನಕ್ಕೆ ತಂದರೆ ಸರಿ ಪಡಿಸಿಕೊಳ್ಳುತ್ತೇವೆ. ಎಲ್ಲರೂ ಸೇರಿಕೊಂಡು ಶಾಲೆಗೆ ವಿದ್ಯಾರ್ಥಿಗಳ ಇನ್ನಷ್ಟು ಸಂಖ್ಯೆ ಹೆಚ್ಚಿಸಿ ಶಾಲೆಯ ಕೀರ್ತಿ ಬೆಳೆಸೋಣಾ ಎಂದು ಹೇಳಿದರು. ಬಸಲಿಂಗ ಬಾಗೋಡಿ ಮಾತನಾಡಿ ಮಕ್ಕಳಿಗೆ ದಿನಾಲು ಎಲ್ಲಾ ರೀತಿಯ ಪಾಠ ಕಲಿಸುವದರ ಜೊತೆಗೆ ಮರಳಿ ನೆನಪಿಸಿಕೊಂಡು ಮಕ್ಕಳ ತಲೆಯಲ್ಲಿ ಉಳಿಯುವ ಹಾಗೆ ಶಿಕ್ಷಣ ನೀಡಬೇಕು.ಪಾಲಕರ ಸಭೆಯು ಪ್ರತಿ ತಿಂಗಳು ಅರ್ಥ ಪೂರ್ಣವಾಗಿ ನಡೆಯಿಲಿ ಎಂದು ಹೇಳಿದರು. ಸಭೆಯಲ್ಲಿ ಮಕ್ಕಳನ್ನು ಎಬ್ಬಿಸಿ ಸರಳ ಪ್ರಶ್ನೆ ಕೇಳಿದಾಗ ಕೆಲವು ಪ್ರಶ್ನೆಗೆ ಮಾತ್ರ ಉತ್ತರವನ್ನು ನೀಡಿದರು. ಪಾಲಕರು ಮತ್ತು ಶಿಕ್ಷಕರ ಮದ್ಯೆ ಕೆಲವು ವಿಚಾರ ನಡೆದವು.
ಈ ಸಮಯದಲ್ಲಿ ಸಿದ್ದಪ್ಪ ಅಂಗಡಿ, ದುಂಡಪ್ಪ ಕೂಲಿಗೋಡ, ಲಕ್ಷ್ಮಣ ಗಲಗಲಿ, ಸಂಜು ಕೊರೆ, ಕೆಂಪವ್ವ ಅಂಗಡಿ, ಶಿಕ್ಷಕರಾದ ಬಿ. ಜೆ. ಪಾರ್ಥನಳ್ಳಿ,ರಾಮು ಹರಿಜನ, ಶೋಭಾ ಮುತಾರಿ, ಪಾಲಕರಾದ ನಾಗಪ್ಪ ಬಿಸನಾಳ, ಶಂಕರ ಮಾಲಗಾರ, ಪ್ರಕಾಶ ಲೋಕನ್ನವರ, ಪ್ರಕಾಶ ಬಾಗೋಡಿ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು