4:28 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.

26/08/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲೆಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು
ದಳವಾಯಿ ಪ್ರೌಢಶಾಲೆಯ ಪ್ರಾಧ್ಯಾಪಕರಾದ ಲಲಿತಾ ಮತ್ತು ಶಾಲಾ ಮುಖ್ಯಸ್ಥರಿಂದ ಕೃಷ್ಣನ ವಿಗ್ರಹಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕಿ ಲಲಿತ ಮಾತನಾಡಿ, ಮಕ್ಕಳು ಎಳೆಯ ವಯಸ್ಸಿನಿಂದಲೇ ನಯ, ವಿನಯ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ತಮಗೆ ಸಹಾಯ ಹಾಗೂ ಒಳ್ಳೆಯದನ್ನು ಮಾಡಿದವರಿಗೆ ಕೃತಜ್ಞತೆ ತಿಳಿಸುವುದು ಹಾಗೆಯೇ ತಪ್ಪು ಮಾಡಿದರೆ ಕ್ಷಮೆ ಕೇಳುವುದನ್ನು ಕಲಿಯಬೇಕು ದೇವರ ಆಶೀರ್ವಾದದ ಜೊತೆಗೆ ಗುರು ಹಿರಿಯರ ಆಶೀರ್ವಾದವು ಬೇಕು. ಇದರಿಂದ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸುತ್ತಾ ಕೃಷ್ಣನ ಗೀತೆ ಹಾಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ರಜನಿ ರವಿ ಮಾತನಾಡಿ ನಮ್ಮ ಅತ್ತೆ ಮಾವ ಸೇರಿದಂತೆ ನಮ್ಮ ಮನೆಯವರು ಹಾಗೂ ನಮ್ಮ ಶಾಲಾ ಶಿಕ್ಷಕರ ತಂಡ ಮತ್ತು ಎಲ್ಲಾ ಪೋಷಕರ ಸಹಕಾರದಿಂದ ಕಳೆದ 11 ವರ್ಷಗಳಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಮುಂದೆಯೂ ತಮ್ಮ ಸಹಕಾರ ಹೀಗೆ ಇರಲಿ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಬಳಿಕ ಚಾಕಲೇಟ್ ತುಂಬಿದ ಮಡಕೆ ಒಡೆಯುವ ಮೂಲಕ ಮಕ್ಕಳಿಗೆ ಮನರಂಜನೆ ನೀಡಲಾಯಿತು.
ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಎಲ್ಲ ಪುಟಾಣಿಗಳಿಗೂ ಬಹುಮಾನ ವಿತರಣೆ ಮಾಡಲಾಯಿತು.
ಶಾಲೆಯ ಪುಟ್ಟ ಪುಟ್ಟ ಮಕ್ಕಳು ಕೃಷ್ಣ , ರುಕ್ಮಿಣಿ, ರಾಧೆಯರ ವೇಷಧಾರಿಗಳಾಗಿ ಮಿಂಚುತ್ತಾ ಪೋಷಕರ ಮನಸೂರೆ ಗೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಶ್ರೀಕಂಠಯ್ಯ, ರವಿ ಶ್ರೀಕಂಠಯ್ಯ, ರಜನಿ ರವಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು