7:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ಡ್ಯುಯಲ್ ಸೆಲೆಬ್ರೇಷನ್: ಸಾಧನೆಯ ಮೈಲಿಗಲ್ಲು

26/08/2024, 18:53

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋಮವಾರ ಡ್ಯುಯಲ್ ಸೆಲೆಬ್ರೇಷನ್ (ದ್ವಿ ಆಚರಣೆ)) ನಡೆಸಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ವತಿಯಿಂದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ಕೇರ್ ಕೌನ್ಸಿಲ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಅವರನ್ನು ಶಾಲು, ಫಲ ಪುಷ್ಪಗಳಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ) ತನ್ನ ್ಲ ೩೦ ವರ್ಷ ಪೂರೈಸಿದ ಸಂದರ್ಭದಲ್ಲಿ ದೈಹಿಕ ಫಿಟ್‌ನೆಸ್ ಅಸೆಸ್‌ಮೆಂಟ್ ಮತ್ತು ಎಕ್ಸರ್ಸೈಸ್ ಪ್ರಿಸ್ಕ್ರಿಪ್ಷನ್ ಕುರಿತು ಎರಡು ದಿನಗಳ ಕಾರ್ಯಕ್ರಮವನ್ನು ಎಂ.ಎಸ್. ರಾಮಯ್ಯ ಕಾಲೇಜ್ ಆಫ್ ಫಿಸಿಯೋಥೆರಪಿ ಇದರ ಡಾ. ಸುಂದರ್ ಕುಮಾರ್ ವೇಲುಸಾಮಿ ಅವರು ಉದ್ಘಾಟಿಸಿದರು.
ಸನ್ಮಾನವನ್ನು ಸ್ವೀಕರಿಸಿದ ಪ್ರೊ. ಡಾ.ಯು.ಟಿ. ಇಫ್ತಿಕಾರ್ ಫರೀದ್ ಮಾತನಾಡಿ ಫಾದರ್ ಮುಲ್ಲರ್ ಸಂಸ್ಥೆಯ ಕಾರ್ಯವೈಖರಿಯನ್ನು ಕೊಂಡಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕ ನಿರ್ದೇಶಕ ವಂ| ಪಾ| ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಮಾತನಾಡಿ ನಮ್ಮ ಸಂಸ್ಥೆ ಆರೋಗ್ಯ ಶಿಕ್ಷಣಕ್ಕೆ ತನ್ನ ಬದ್ಧತೆಯನ್ನು ಹೊಂದಿದೆ. ಆನರಿಗೆ ಆರೋಗ್ಯ ವನ್ನು ನೀಡುವ ಸಂದರ್ಭದಲ್ಲಿ ನುರಿತ ವೈದ್ಯರುಗಳು ಹಾಘೂ ಇತರ ಸಿಬ್ಬಂದಿಯವರು ಒಂದು ತಂಡವಾಗಿ ಕೆಲಸ ಮಾಡಿ ಉತ್ತಮ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದಾರೆ ಎಂದರು. ವೇದಿಕೆಯಲ್ಲಿ ಗಣ್ಯರು ರೆ.ಫಾ. ಫೌಸ್ಟಿನ್ ಲೂಕಾಸ್ ಲೋಬೋ, ರೆ.ಫಾ. ಅಜಿತ್ ಬಿ.ಮಿನೇಜಸ್, ರೆ.ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ಡಾ. ಆಂಟನಿ ಸಿಲ್ವನ್ ಡಿಸೋಜಾ, ಡಾ. ಹಿಲ್ಡಾ ಫೆರ್ನಾಂಡಿಸ್, ಮತ್ತು ಪ್ರೊ.ಚೆರಿಶ್ಮಾ ಡಿಸಿಲ್ವಾ ಉಪಸ್ಥಿತರಿದ್ದರು. ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೀತಲ್ ವಿ ಪೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು