5:51 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅಮಾನತು

27/08/2024, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ಜಮೆಯಾಗಿರುವುದು ಪತ್ತೆಯಾಗಿದೆ.


ಸದ್ಯದ ಮಟ್ಟಿಗೆ ಸರಕಾರದ 9 ಸಾವಿರ ಹಣ ಯುವತಿಯ ಖಾತೆಗೆ ಜಮಾವಾಗಿದೆ. ಪ್ರಕರಣ ಸಂಬಂಧ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ. ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಇಲಾಖೆಯಿಂದ ಲಕ್ಷಗಟ್ಟಲೇ ಹಣ ಯುವತಿಯ ಖಾತೆಗೆ ಜಮಾವಾಗಿರೋ ಅನುಮಾನವಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶ ಪಡೆದಿದ್ದರು.
ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಉಂಟಾಗಿದೆ.
ಕೊಪ್ಪ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು