6:04 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅಮಾನತು

27/08/2024, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ಜಮೆಯಾಗಿರುವುದು ಪತ್ತೆಯಾಗಿದೆ.


ಸದ್ಯದ ಮಟ್ಟಿಗೆ ಸರಕಾರದ 9 ಸಾವಿರ ಹಣ ಯುವತಿಯ ಖಾತೆಗೆ ಜಮಾವಾಗಿದೆ. ಪ್ರಕರಣ ಸಂಬಂಧ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ. ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಇಲಾಖೆಯಿಂದ ಲಕ್ಷಗಟ್ಟಲೇ ಹಣ ಯುವತಿಯ ಖಾತೆಗೆ ಜಮಾವಾಗಿರೋ ಅನುಮಾನವಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶ ಪಡೆದಿದ್ದರು.
ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಉಂಟಾಗಿದೆ.
ಕೊಪ್ಪ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು