8:42 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅಮಾನತು

27/08/2024, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ಜಮೆಯಾಗಿರುವುದು ಪತ್ತೆಯಾಗಿದೆ.


ಸದ್ಯದ ಮಟ್ಟಿಗೆ ಸರಕಾರದ 9 ಸಾವಿರ ಹಣ ಯುವತಿಯ ಖಾತೆಗೆ ಜಮಾವಾಗಿದೆ. ಪ್ರಕರಣ ಸಂಬಂಧ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತು ಮಾಡಲಾಗಿದೆ. ಆನ್ ಲೈನ್ ಟಿಕೆಟ್ ಫೋರ್ಜರಿ ಮಾಡಿ ಸರ್ಕಾರಕ್ಕೆ ಮೋಸ ಮಾಡಲಾಗಿದೆ. ಇಲಾಖೆಯಿಂದ ಲಕ್ಷಗಟ್ಟಲೇ ಹಣ ಯುವತಿಯ ಖಾತೆಗೆ ಜಮಾವಾಗಿರೋ ಅನುಮಾನವಿದೆ.
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶ ಪಡೆದಿದ್ದರು.
ಮದ್ಯ ಚೆಕ್ ಮಾಡಲು ಹೋಗಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.
ಜೂನ್ ತಿಂಗಳ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಹಾಗೂ ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ಸಂಬಂಧವೇ ಇಲ್ಲ.
ನಕಲಿ ಆನ್ ಲೈನ್ ಟಿಕೆಟ್ ಮುದ್ರಿಸಿ ಸರ್ಕಾರಕ್ಕೆ ಮೋಸ ಮಾಡಿರೋ ಬಗ್ಗೆ ಇಲಾಖೆಗೆ ಅನುಮಾನ ಉಂಟಾಗಿದೆ.
ಕೊಪ್ಪ ಡಿಎಫ್ ಓ ಉಪೇಂದ್ರ ಪ್ರತಾಪ್ ಸಿಂಗ್ ಅವರು ಕಳಸ ಡಿ.ಆರ್.ಎಫ್.ಓ. ಚಂದನ್ ಗೌಡ ಅಮಾನತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು