6:02 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; 530 ಕೇಂದ್ರಗಳಲ್ಲಿ  ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ

28/08/2021, 10:50

ಬೆಂಗಳೂರು(reporterkarnataka.com): ಸಿಇಟಿ ಪರೀಕ್ಷೆ (ಸಾಮಾನ್ಯ ಪ್ರವೇಶ ಪರೀಕ್ಷೆ) ಇಂದಿನಿಂದ(ಆ.28) 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ನಡೆಯಲಿದೆ. 

ಇಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ 6 ಕೇಂದ್ರಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದು ಕೊಳ್ಳಲಾಗಿದೆ ಎಂದರು.

ಪರೀಕ್ಷೆ ದಿನದಂದು ಗೃಹ ಇಲಾಖೆಯ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಕೇವಲ ಒಂದು ಗಂಟೆ 20 ನಿಮಿಷಗಳನ್ನು ಪ್ರತಿ ಪೇಪರ್‌ಗೆ ನೀಡಲಾಗಿರುತ್ತದೆ.ಒಟ್ಟಾರೆ ಪರೀಕ್ಷೆಯು 180 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಆ.30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು