5:03 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

28/08/2024, 01:49

ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಮೊದಲ ಆರೋಪಿ ಅಲ್ತಾಫ್​ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್​ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್​ ಅವರು ಹೇಳಿದ್ದಾರೆ.
ಬಂಧಿತ ಅಭಯನನ್ನು ನಾಳೆ ಗುರುವಾರ ಕೋರ್ಟಿಗೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ವಿಚಾರಣೆ ನಡೆಸಲಾಗುವುದು
ಎಂದು ಅವರು ನುಡಿದರು.ಎನ್ ಡಿಪಿಎಸ್ ಪ್ರಕರಣದಲ್ಲಿ ಅಭಯ್​ನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್​ಪಿ ನುಡಿದರು.
ಬಂಧಿತ ಆರೋಪಿ ಅಭಯ್ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ.
ಅಭಯ್ ಈ ಹಿಂದೆ ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಆತ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು