10:31 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ: ಅಸಾದಿ ಕೈ ಹಿಡಿದ ಅದೃಷ್ಟ; 2ನೇ ಭಾರಿ ಅಧ್ಯಕ್ಷರಾಗಿ ಆಯ್ಕೆ; ಜೋಡೆತ್ತುಗಳ ಕಾರುಬಾರು!

28/08/2024, 01:52

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ.
ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅಸಾದಿ ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಪಟ್ಟಣ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಪಟ್ಟಣದ ಸಾರ್ವಜನಿಕರಲ್ಲಿ ಮಾತು ಕೇಳಿ ಬರುತ್ತಿದೆ.
*ಅಧ್ಯಕ್ಷರು ಉಪಾಧ್ಯಕ್ಷರು ಬದಲಾವಣೆ:* ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ ಉಪಾಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ಅಧ್ಯಕ್ಷರಾಗಿ ಬದಲಾವಣೆ ಆಗಿದ್ದಾರೆ.
*ನಾಮಪತ್ರ ಸಲ್ಲಿಸಿದ್ದವರು ಯಾರು?* ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್, ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಮೇಶ್ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತ ಇದ್ದ ಕಾಂಗ್ರೆಸ್ ಒಂಬತ್ತು ಮತಗಳಿಂದ ಜಯಭೇರಿ ಭಾರಿಸಿದ್ದು
ಅದೃಷ್ಟ ಅಸಾದಿ ಕೈ ಹಿಡಿದಿದೆ.
*ಜೋಡೆತ್ತುಗಳ ದರ್ಬಾರ್!*
ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್. ಎಂ. ಮಂಜುನಾಥ್ ಗೌಡರು ಪಟ್ಟಣ ಪಂಚಾಯಿತಿ ಸದಸ್ಯರಿಗೆ ವಿಪ್ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಸಮೀಪದ ರೆಸಾರ್ಟ್ ಒಂದರಲ್ಲಿ ಎಲ್ಲರನ್ನು ಗೌಪ್ಯವಾಗಿ ಇಟ್ಟುಕೊಂಡು ಚುನಾವಣೆ ಗೆಲ್ಲುವ ಸಲುವಾಗಿ ರೆಸಾರ್ಟ್ ರಾಜಕೀಯಕ್ಕೆ ಹೋಗಿದ್ದರು. ಒಟ್ಟಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ್ತೊಮ್ಮೆ ಜೋಡೆತ್ತುಗಳ ಕೈ ಹಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು