1:20 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು