4:18 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು