3:42 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು