9:17 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಆಟೋ ಚಾಲಕರ ಬೃಹತ್ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ತಡೆ

29/08/2024, 18:41

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲು
ಎಲೆಕ್ಟಿಕಲ್‌ ಅಟೋರಿಕ್ಷಾಗಳಿಗೆ ನೀಡಿರುವ ಅನುಮತಿ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ಚಾಲಕರು ಮೆರವಣಿಗೆ ಮೂಲಕ ಪ್ರತಿಭಟನಾ ಸಭೆ ನಡೆಸಿದರು.


ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.
ಈ ಸಂಧರ್ಭದಲ್ಲಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.
ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದ.ಕ. ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.
ನಗರದಲ್ಲಿ ಏಳರಿಂದ ಒಂಬತ್ತು ಸಾವಿರ ರಿಕ್ಷಾ ಚಾಲಕರು ಬಾಡಿಗೆಗಾಗಿ ಪರಿತಪಿಸುತ್ತಿದ್ದಾರೆ. ರಿಕ್ಷಾ ಪಾರ್ಕ್ ನಲ್ಲಿ ಲೆಕ್ಕಕ್ಕಿಂತ ಹೆಚ್ಚು ರಿಕ್ಷಾ ನಿಂತರೆ ಪೋಲೀಸರು ಪ್ರಕರಣ ದಾಖಲಿಸುತ್ತಾರೆ. ಸುಮಾರು ಒಂಬತ್ತು ಸಾವಿರ ರಿಕ್ಷಾಗಳಿಗೆ 115 ಅಧಿಕೃತ ಪಾರ್ಕ್ ಇರುವುದು. ಹೀಗಿರುವಾಗ ಇಷ್ಟು ರಿಕ್ಷಾ ಗಳು ಪಾರ್ಕ್ ಮಾಡುವುದು ಎಲ್ಲಿ ಎಂದು ಪ್ರಶ್ನಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಲೋಕೇಶ್ ಶೆಟ್ಟಿ ಬಲ್ಲಾಳ ಬಾಗ್, ವಿಷ್ಣು ಮೂರ್ತಿ, ಅರುಣ್ ಕುಮಾರ್ ಮಾತನಾಡಿದರು.
ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು