11:04 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ

30/08/2024, 10:31

ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್ ನೊರೊನ್ಹಾ (30 ) ಮತ್ತಿಬ್ಬರು ಬಂಧಿತ ಆರೋಪಿಗಳು.
ಅತ್ಯಾಚಾರ ಆರೋಪಿ  ಬಂಗ್ಲೆಗುಡ್ಡೆಯ ಅಲ್ತಾಫ್ (34) ಮದ್ಯ ಪೂರೈಕೆ ಮಾಡಿದ  ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್(35), ಡ್ರಗ್ ಪೂರೈಕೆ ಮಾಡಿದ ಕಾರ್ಕಳ ಕೋರ್ಟ್ ರಸ್ತೆಯ  ಆರೋಪಿ ಅಭಯ್ (23) ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಇದೀಗ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, 4 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮದ್ಯ ಪೂರೈಕೆ ಮಾಡಿದ ರಂಗನ ಪಲ್ಕೆಯ ಸಾವಿವೋ ರಿಚರ್ಡ್‌ ಕ್ವಾಡ್ರಸ್ ಅವನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಕಾರ್ಕಳದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಸಂತ್ರಸ್ತ ಯುವತಿಯನ್ನು ಕಾರ್ಕಳ ಪೊಲೀಸರು ಹಾಜರು ಪಡಿಸಿದ್ದರು. ಸಿಆರ್ ಪಿಸಿ 164 ನಿಯಮದಂತೆ ಸಂತ್ರಸ್ತೆ ಹೇಳಿಕೆ ದಾಖಲಾಗಿದೆ.  ತನಿಖಾಧಿಕಾರಿ ಮಂಜಪ್ಪ ನೇತೃತ್ವದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಳೆದ ಶುಕ್ರವಾರ ಕಾರ್ಕಳ ಕುಕ್ಕುಂದೂರು ಗ್ರಾಮದ ಯುವತಿ ಯ ಮೇಲೆ  ಮಾದಕ ವಸ್ತು ನೀಡಿ ಅತ್ಯಾಚಾರ   ಗೈಯ್ಯಲಾಗಿತ್ತು.
ಕಾರ್ಕಳ ನಗರ ಠಾಣೆಯಲ್ಲಿ ಅ ಕ್ರ146/2024 ಕಲಂ  8(C), 22(b) NDPS ಹಾಗೂ  ಕಲಂ 111, 3(5)
ಬಿ.ಎನ್‌.ಎಸ್‌-2023ರಂತೆ ಪ್ರಕರಣ ದಾಖಲಾಗಿತ್ತು.
*ಆಂಧ್ರದ ಲಿಂಕ್ :* ಮಾದಕ ವಸ್ತುಗಳ ಮಾರಾಟಕ್ಕೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ರಸ್ತೆಯ ಅಭಯ್ ಗೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಕಾಪು ಶಂಕರಪುರದ ಜಾನ್ ನೊರೊನ್ಹಾ  (30 )  ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು