10:02 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಆಟೋ ಚಾಲಕರುಗಳಲ್ಲಿ ಗೊಂದಲ ಬೇಡ, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ: ಜಿಲ್ಲಾಧಿಕಾರಿ

30/08/2024, 10:39

ಮಂಗಳೂರು(reporterkarnataka.com): ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರ ಪ್ರಕಾರ ಇ-ಆಟೋರಿಕ್ಷಾಗಳಿಗೆ ಯಾವುದೇ ರೀತಿಯ ನಿರ್ಬಂಧ, ಕಾನೂನುಗಳನ್ನು ಜಾರಿಗೊಳಿಸುವ ಅಧಿಕಾರ ನಮಗೆ ಇಲ್ಲ. ಜಿಲ್ಲೆಯಲ್ಲಿನ ಆಟೋರಿಕ್ಷಾ ಚಾಲಕರುಗಳಲ್ಲಿ ಗೊಂದಲಗಳಿದ್ದು, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸ್ಪಷ್ಟಪಡಿಸಿದರು.
ಅವರು ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನಾವು ಇಲ್ಲಿ 1993-94 ರಿಂದಲೂ ಅನ್ವಯವಾಗಿರುವ ಆದೇಶದಂತೆ ನಡೆದುಕೊಂಡು ಬರುತ್ತಿದ್ದು, ಇಲ್ಲಿಯ ತನಕ ಯಾವುದೇ ರೀತಿಯ ಬದಲಾವಣೆಗಳನ್ನು ತಂದಿಲ್ಲ. ಈ ಮೊದಲು ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರ ಹಿತ ದೃಷ್ಠಿಯಿಂದ ಈ ಹಿಂದಿನ ಜಿಲ್ಲಾಧಿಕಾರಿಗಳು ರಾಜ್ಯ ಮೋಟರ್ ಸೈಕಲ್ ಕಾಯ್ದೆ 115ರ ಪ್ರಕಾರ ವಲಯ-1, ವಲಯ-2 ಎಂದು ವಿಭಜಿಸಿದ್ದು, ಇತ್ತೀಚೆಗೆ ಬಂದಂತಹ ಇ-ಅಟೋ ರಿಕ್ಷಾಗಳು ಈ ನಿಯಮವನ್ನು ಪಾಲಿಸಿದ್ದು, ಇಷ್ಟೆಲ್ಲ ಗೊಂದಲಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರಲ್ಲಿಯೇ ಇ-ಆಟೋ ರಿಕ್ಷಾಗಳಿಗೆ ರಿಯಾಯಿತಿಯನ್ನು ನೀಡಿದ್ದು, ನಾವು ಯಾವುದೇ ರೀತಿಯ ಆದೇಶ, ಕಾನೂನು, ನಿಯಮಗಳನ್ನು ಹೊರಿಸಲು ಸಾಧ್ಯವಿಲ್ಲ. ನಾವು ಯಾವುದೇ ನಿಯಮ ಮಾಡಬೇಕಾದರೂ ರಾಜ್ಯ ಮೋಟರ್ ಸೈಕಲ್ ಕಾಯ್ದೆ 115 ರ ಅಡಿಯಲ್ಲಿ ನಿಯಮ ಮಾಡಬೇಕು ಆದರೆ ಅವರಿಗೆ ಸೆಕ್ಷನ್ 66-1 ರಲ್ಲಿಯೇ ರಿಯಾಯಿತಿ ಇರುವುದರಿಂದ ನಾವು ಏನನ್ನು ಮಾಡಲು ಬರುವುದಿಲ್ಲ ಎಂದರು.
ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರು ಮತ್ತು ಇ-ಆಟೋ ರಿಕ್ಷಾ ಚಾಲಕರು ಹೈಕೋರ್ಟ್‌ಗೆ ಹೋಗಿದ್ದು, ಹೈಕೋರ್ಟ್ ಕೇಂದ್ರ ಮೋಟರ್ ಸೈಕಲ್ ಕಾಯ್ದೆಯನ್ನು ಎತ್ತಿ ಹಿಡಿದುದ್ದು, ಅದರ ಆದೇಶದಂತೆ ನಾವು ನಿರ್ದೇಶನವನ್ನು ನೀಡಿದ್ದೆವೆಯೇ ಹೊರತು ಯಾವುದೇ ರೀತಿಯಲ್ಲಿಯೂ ಇ-ಆಟೋ ರಿಕ್ಷಾ ಚಾಲಕರ ಪರವಾಗಿ ನಾವು ನಿರ್ದೇಶನವನ್ನು ನೀಡಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು