9:07 AM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಆಟೋ ಚಾಲಕರುಗಳಲ್ಲಿ ಗೊಂದಲ ಬೇಡ, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ: ಜಿಲ್ಲಾಧಿಕಾರಿ

30/08/2024, 10:39

ಮಂಗಳೂರು(reporterkarnataka.com): ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರ ಪ್ರಕಾರ ಇ-ಆಟೋರಿಕ್ಷಾಗಳಿಗೆ ಯಾವುದೇ ರೀತಿಯ ನಿರ್ಬಂಧ, ಕಾನೂನುಗಳನ್ನು ಜಾರಿಗೊಳಿಸುವ ಅಧಿಕಾರ ನಮಗೆ ಇಲ್ಲ. ಜಿಲ್ಲೆಯಲ್ಲಿನ ಆಟೋರಿಕ್ಷಾ ಚಾಲಕರುಗಳಲ್ಲಿ ಗೊಂದಲಗಳಿದ್ದು, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸ್ಪಷ್ಟಪಡಿಸಿದರು.
ಅವರು ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನಾವು ಇಲ್ಲಿ 1993-94 ರಿಂದಲೂ ಅನ್ವಯವಾಗಿರುವ ಆದೇಶದಂತೆ ನಡೆದುಕೊಂಡು ಬರುತ್ತಿದ್ದು, ಇಲ್ಲಿಯ ತನಕ ಯಾವುದೇ ರೀತಿಯ ಬದಲಾವಣೆಗಳನ್ನು ತಂದಿಲ್ಲ. ಈ ಮೊದಲು ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರ ಹಿತ ದೃಷ್ಠಿಯಿಂದ ಈ ಹಿಂದಿನ ಜಿಲ್ಲಾಧಿಕಾರಿಗಳು ರಾಜ್ಯ ಮೋಟರ್ ಸೈಕಲ್ ಕಾಯ್ದೆ 115ರ ಪ್ರಕಾರ ವಲಯ-1, ವಲಯ-2 ಎಂದು ವಿಭಜಿಸಿದ್ದು, ಇತ್ತೀಚೆಗೆ ಬಂದಂತಹ ಇ-ಅಟೋ ರಿಕ್ಷಾಗಳು ಈ ನಿಯಮವನ್ನು ಪಾಲಿಸಿದ್ದು, ಇಷ್ಟೆಲ್ಲ ಗೊಂದಲಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರಲ್ಲಿಯೇ ಇ-ಆಟೋ ರಿಕ್ಷಾಗಳಿಗೆ ರಿಯಾಯಿತಿಯನ್ನು ನೀಡಿದ್ದು, ನಾವು ಯಾವುದೇ ರೀತಿಯ ಆದೇಶ, ಕಾನೂನು, ನಿಯಮಗಳನ್ನು ಹೊರಿಸಲು ಸಾಧ್ಯವಿಲ್ಲ. ನಾವು ಯಾವುದೇ ನಿಯಮ ಮಾಡಬೇಕಾದರೂ ರಾಜ್ಯ ಮೋಟರ್ ಸೈಕಲ್ ಕಾಯ್ದೆ 115 ರ ಅಡಿಯಲ್ಲಿ ನಿಯಮ ಮಾಡಬೇಕು ಆದರೆ ಅವರಿಗೆ ಸೆಕ್ಷನ್ 66-1 ರಲ್ಲಿಯೇ ರಿಯಾಯಿತಿ ಇರುವುದರಿಂದ ನಾವು ಏನನ್ನು ಮಾಡಲು ಬರುವುದಿಲ್ಲ ಎಂದರು.
ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರು ಮತ್ತು ಇ-ಆಟೋ ರಿಕ್ಷಾ ಚಾಲಕರು ಹೈಕೋರ್ಟ್‌ಗೆ ಹೋಗಿದ್ದು, ಹೈಕೋರ್ಟ್ ಕೇಂದ್ರ ಮೋಟರ್ ಸೈಕಲ್ ಕಾಯ್ದೆಯನ್ನು ಎತ್ತಿ ಹಿಡಿದುದ್ದು, ಅದರ ಆದೇಶದಂತೆ ನಾವು ನಿರ್ದೇಶನವನ್ನು ನೀಡಿದ್ದೆವೆಯೇ ಹೊರತು ಯಾವುದೇ ರೀತಿಯಲ್ಲಿಯೂ ಇ-ಆಟೋ ರಿಕ್ಷಾ ಚಾಲಕರ ಪರವಾಗಿ ನಾವು ನಿರ್ದೇಶನವನ್ನು ನೀಡಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು