7:13 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್‌ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್

28/08/2021, 13:42

Reporterkarnataka.com
ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ.

ಮೊನ್ನೆ ಕಾಬೂಲ್ ಏರ್​ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖೋರಾಸನ ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಶಪಥ ಮಾಡಿದ್ದ ಅಮೆರಿಕಾ 36 ಗಂಟೆಗಳಲ್ಲಿ ದಾಳಿ ನಡೆಸಿ ಸೇಡು ತೀರಿಸಿಕೊಂಡಂತಾಗಿದೆ.

ಏರ್​ಪೋರ್ಟ್ ಸಮೀಪ ಹೋಗದಂತೆ ತಾಲಿಬಾನ್ ತಡೆಯೊಡ್ಡಿದ್ದು, ಕಾಬೂಲ್ ಏರ್​ಪೋರ್ಟ್ ಗೇಟ್ ಬಳಿ ಹೋಗದಂತೆ ಆಮೆರಿಕಾದ ನಾಗರಿಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ಬೇರೆ ಬೇರೆ ದೇಶಗಳ ಗುಪ್ತಚರ ಇಲಾಖೆಗಳು ಏರ್​ಪೋರ್ಟ್ ಬಳಿ ದೊಡ್ಡ ಸ್ಪೋಟ ನಡೆಸಲು ಐಸಿಎಸ್ ಸಂಚು ಹೂಡಿದೆ ಎಂಬ ಮಾಹಿತಿ ನೀಡಿರುವ ಕಾರಣ ಈ ತೆರನಾದ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಸಂಘಟನೆಗೆ ನಿನ್ನೆಯಷ್ಟೇ ಖಡಕ್​ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ನಿಮ್ಮನ್ನು ನಾವು ಎಂದಿಗೂ ಮರೆಯುವುದಿಲ್ಲ. ನೀವು ಎಲ್ಲೇ ಅವಿತಿದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಹೇಳಿದ್ದರು.

ಉಗ್ರರ ಇಂತಹ ದಾಳಿಗಳಿಂದ ಅಮೆರಿಕ ಕಂಗೆಡುವುದಿಲ್ಲ. ಜನರನ್ನು ಸ್ಥಳಾಂತರ ಮಾಡುವುದನ್ನೂ ನಿಲ್ಲಿಸುವುದಿಲ್ಲ. ನೀವು ಏನೇ ಮಾಡಿದರೂ ನಾವು ಜನರನ್ನು ಸ್ಥಳಾಂತರ ಮಾಡಿಯೇ ತೀರುತ್ತೇವೆ. ಈಗಾಗಲೇ ಐಸಿಸ್-ಕೆ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲು ಸೂಚಿಸಲಾಗಿದೆ. ನಾವು ಎಲ್ಲಿ ಹೊಡೆಯಬೇಕು, ಹೇಗೆ ಹೊಡೆಯಬೇಕು, ಎಷ್ಟೊತ್ತಿಗೆ ಹೊಡೆಯಬೇಕೋ ಅಷ್ಟೊತ್ತಿಗೆ ಹೊಡೆಯುತ್ತೇವೆ. ನಮ್ಮ ವಿರುದ್ಧ ಐಸಿಸ್​ ಉಗ್ರರು ಗೆಲುವು ಸಾಧಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು