3:10 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್‌ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್

28/08/2021, 13:42

Reporterkarnataka.com
ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ.

ಮೊನ್ನೆ ಕಾಬೂಲ್ ಏರ್​ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖೋರಾಸನ ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಶಪಥ ಮಾಡಿದ್ದ ಅಮೆರಿಕಾ 36 ಗಂಟೆಗಳಲ್ಲಿ ದಾಳಿ ನಡೆಸಿ ಸೇಡು ತೀರಿಸಿಕೊಂಡಂತಾಗಿದೆ.

ಏರ್​ಪೋರ್ಟ್ ಸಮೀಪ ಹೋಗದಂತೆ ತಾಲಿಬಾನ್ ತಡೆಯೊಡ್ಡಿದ್ದು, ಕಾಬೂಲ್ ಏರ್​ಪೋರ್ಟ್ ಗೇಟ್ ಬಳಿ ಹೋಗದಂತೆ ಆಮೆರಿಕಾದ ನಾಗರಿಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ಬೇರೆ ಬೇರೆ ದೇಶಗಳ ಗುಪ್ತಚರ ಇಲಾಖೆಗಳು ಏರ್​ಪೋರ್ಟ್ ಬಳಿ ದೊಡ್ಡ ಸ್ಪೋಟ ನಡೆಸಲು ಐಸಿಎಸ್ ಸಂಚು ಹೂಡಿದೆ ಎಂಬ ಮಾಹಿತಿ ನೀಡಿರುವ ಕಾರಣ ಈ ತೆರನಾದ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಸಂಘಟನೆಗೆ ನಿನ್ನೆಯಷ್ಟೇ ಖಡಕ್​ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ನಿಮ್ಮನ್ನು ನಾವು ಎಂದಿಗೂ ಮರೆಯುವುದಿಲ್ಲ. ನೀವು ಎಲ್ಲೇ ಅವಿತಿದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಹೇಳಿದ್ದರು.

ಉಗ್ರರ ಇಂತಹ ದಾಳಿಗಳಿಂದ ಅಮೆರಿಕ ಕಂಗೆಡುವುದಿಲ್ಲ. ಜನರನ್ನು ಸ್ಥಳಾಂತರ ಮಾಡುವುದನ್ನೂ ನಿಲ್ಲಿಸುವುದಿಲ್ಲ. ನೀವು ಏನೇ ಮಾಡಿದರೂ ನಾವು ಜನರನ್ನು ಸ್ಥಳಾಂತರ ಮಾಡಿಯೇ ತೀರುತ್ತೇವೆ. ಈಗಾಗಲೇ ಐಸಿಸ್-ಕೆ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲು ಸೂಚಿಸಲಾಗಿದೆ. ನಾವು ಎಲ್ಲಿ ಹೊಡೆಯಬೇಕು, ಹೇಗೆ ಹೊಡೆಯಬೇಕು, ಎಷ್ಟೊತ್ತಿಗೆ ಹೊಡೆಯಬೇಕೋ ಅಷ್ಟೊತ್ತಿಗೆ ಹೊಡೆಯುತ್ತೇವೆ. ನಮ್ಮ ವಿರುದ್ಧ ಐಸಿಸ್​ ಉಗ್ರರು ಗೆಲುವು ಸಾಧಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು