8:57 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್‌ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್

28/08/2021, 13:42

Reporterkarnataka.com
ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ.

ಮೊನ್ನೆ ಕಾಬೂಲ್ ಏರ್​ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖೋರಾಸನ ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಶಪಥ ಮಾಡಿದ್ದ ಅಮೆರಿಕಾ 36 ಗಂಟೆಗಳಲ್ಲಿ ದಾಳಿ ನಡೆಸಿ ಸೇಡು ತೀರಿಸಿಕೊಂಡಂತಾಗಿದೆ.

ಏರ್​ಪೋರ್ಟ್ ಸಮೀಪ ಹೋಗದಂತೆ ತಾಲಿಬಾನ್ ತಡೆಯೊಡ್ಡಿದ್ದು, ಕಾಬೂಲ್ ಏರ್​ಪೋರ್ಟ್ ಗೇಟ್ ಬಳಿ ಹೋಗದಂತೆ ಆಮೆರಿಕಾದ ನಾಗರಿಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ಬೇರೆ ಬೇರೆ ದೇಶಗಳ ಗುಪ್ತಚರ ಇಲಾಖೆಗಳು ಏರ್​ಪೋರ್ಟ್ ಬಳಿ ದೊಡ್ಡ ಸ್ಪೋಟ ನಡೆಸಲು ಐಸಿಎಸ್ ಸಂಚು ಹೂಡಿದೆ ಎಂಬ ಮಾಹಿತಿ ನೀಡಿರುವ ಕಾರಣ ಈ ತೆರನಾದ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಸಂಘಟನೆಗೆ ನಿನ್ನೆಯಷ್ಟೇ ಖಡಕ್​ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ನಿಮ್ಮನ್ನು ನಾವು ಎಂದಿಗೂ ಮರೆಯುವುದಿಲ್ಲ. ನೀವು ಎಲ್ಲೇ ಅವಿತಿದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಹೇಳಿದ್ದರು.

ಉಗ್ರರ ಇಂತಹ ದಾಳಿಗಳಿಂದ ಅಮೆರಿಕ ಕಂಗೆಡುವುದಿಲ್ಲ. ಜನರನ್ನು ಸ್ಥಳಾಂತರ ಮಾಡುವುದನ್ನೂ ನಿಲ್ಲಿಸುವುದಿಲ್ಲ. ನೀವು ಏನೇ ಮಾಡಿದರೂ ನಾವು ಜನರನ್ನು ಸ್ಥಳಾಂತರ ಮಾಡಿಯೇ ತೀರುತ್ತೇವೆ. ಈಗಾಗಲೇ ಐಸಿಸ್-ಕೆ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲು ಸೂಚಿಸಲಾಗಿದೆ. ನಾವು ಎಲ್ಲಿ ಹೊಡೆಯಬೇಕು, ಹೇಗೆ ಹೊಡೆಯಬೇಕು, ಎಷ್ಟೊತ್ತಿಗೆ ಹೊಡೆಯಬೇಕೋ ಅಷ್ಟೊತ್ತಿಗೆ ಹೊಡೆಯುತ್ತೇವೆ. ನಮ್ಮ ವಿರುದ್ಧ ಐಸಿಸ್​ ಉಗ್ರರು ಗೆಲುವು ಸಾಧಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು