6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು