12:02 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು