5:57 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು