5:28 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು