6:44 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್!: ಸಕಾಲದಲ್ಲಿ ಚಿಕಿತ್ಸೆ ಲಭಿಸದೆ 19ರ ಯುವಕ ಸಾವು; 3 ವರ್ಷದಲ್ಲಿ 3ನೇ ಬಲಿ!!

31/08/2024, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಸಮೀಪದ ಕೋಣೆಗೂಡು ಗ್ರಾಮದ ಯುವಕನೊಬ್ಬ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಕುಗ್ರಾಮಕ್ಕೆ ಜೋಳಿಗೆಯೇ ಆ್ಯಂಬ್ಯುಲೆನ್ಸ್ ಆಗಿದೆ. ಜೋಳಿಗೆಯಲ್ಲೇ ಅನಾರೋಗ್ಯಪೀಡಿತ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ, ಮೃತದೇಹವನ್ನು ಜೋಳಿಗೆಯಲ್ಲೇ ವಾಪಸ್ ತರಲಾಗಿದೆ.


ಕೋಣೆಗೂಡು ಗ್ರಾಮದ ಅವಿನಾಶ್ ಎಂಬ 19ರ ಹರೆಯದ ಯುವಕ ಅನಾರೋಗ್ಯಕ್ಕೀಡಾಗಿದ್ದರು. ರಸ್ತೆ ಸಂಪರ್ಕವಿಲ್ಲದ ಕುಗ್ರಾಮ ಆಗಿರುವುದರಿಂದ ಅನಾರೋಗ್ಯಪೀಡಿತ ಯುವಕನನ್ನು ಬೆನ್ನ ಮೇಲೆ ಹಾಕಿ ಕೊಂಡು ಸಂಬಂಧಿಕರು ಮರದ ಕಾಲುಸಂಕವಿರುವ ತೋಡು ದಾಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದರು. ಮತ್ತೆ ಮೃತದೇಹವನ್ನು ಅದೇ ರೀತಿ ಜೋಳಿಗೆಯಲ್ಲಿ ಹಾಕಿ ಸಾಗಿಸಲಾಯಿತು. ಇಲ್ಲಿಗೆ ಆ್ಯಂಬ್ಯುಲೆನ್ಸ್ ಬಂದ್ರೂ ನಿಲ್ಲೋದು ಊರಿನಿಂದ 1.5 ಕಿ.ಮೀ. ದೂರದಲ್ಲಿ!. ಆ್ಯಂಬ್ಯುಲೆನ್ಸ್ ಬಂದ್ರು ಹಳ್ಳ ದಾಟೋಕ್ಕೆ ಆಗೋಲ್ಲ.
ಜೋಳಿಗೆಯಲ್ಲಿ ಹೊತ್ಕೊಂಡೆ ಕಾಲು ಸಂಕ ದಾಟಬೇಕು.
ಮೂರು ವರ್ಷದಲ್ಲಿ ಒಂದೇ ಗ್ರಾಮದ ಮೂರು ಜನ ಸಾವನ್ನಪ್ಪಿದ್ದಾರೆ. ಗಂಭೀರ ಕಾಯಿಲೆ ಬಿದ್ರೆ ಊರಿನ ಜನ ಇದ್ರೆ ಮಾತ್ರ ಜೀವ ಉಳಿಯೋದು ಎನ್ನುವ ಪರಿಸ್ಥಿತಿ ಇದೆ.
ಜೀವ ಉಳಿಸಿಕೊಳ್ಳೋಕೆ ಸೇತುವೆ ರಸ್ತೆ ಮಾಡಿ‌ ಎಂದು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಕೋಣೆಗೂಡು ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು