12:31 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ

28/08/2021, 15:40

ಕೊಲ್ಕತ್ತಾ (Reporterkarnataka.com)

ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಭಿಷೇಕ್ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್(TMC)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 6 ರಂದು ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದ್ದು, ಅವರ ಪತ್ನಿ ರುಜಿರಾ ಅವರಿಗೂ ಇದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ.

ಮುಂದಿನ ತಿಂಗಳು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು