1:28 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ; ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರು

28/08/2021, 16:47

ಮೈಸೂರು(reporterkarnataka.com): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ನಡೆದ ಎಂಬಿಎ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ  ಕೂಡ ಸೇರಿದ್ದಾನೆ ಎಂಬ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ದೆಹಲಿಯಲ್ಲಿ ಬಸ್ ನಲ್ಲಿ ನಡೆದ ಅತ್ಯಾಚಾರವನ್ನು ಮತ್ತೆ ನೆನಪಿಸುವಂತಿದೆ.

ಡಿಜಿ ಐಜಿಪಿ ಪ್ರವೀಣ್ ಸೂದ್ ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪೊಲೀಸರ 7 ತಂಡ ರಚಿಸಲಾಗಿತ್ತು. ಆರೋಪಿಗಳು ಎಲ್ಲರೂ ತಮಿಳುನಾಡಿನ ತಿರುಪುರ್ ಗೆ ಸೇರಿದವರಾಗಿದ್ದಾರೆ. ಅವರೆಲ್ಲಾ ಕೂಲಿ ಕಾರ್ಮಿಕರರು. ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳಿದ್ದಾರೆ. ಐವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬಾತ 17 ವರ್ಷದ ಬಾಲಾಪರಾಧಿಯಾಗಿದ್ದಾನೆ ಎಂದರು.

ಇವರು ಕೆಲವು ಬಾರಿ ಮೈಸೂರಿಗೆ ಬಂದು ಹೋಗುತ್ತಿದ್ದರು. ವಾಪಸ್ ಹೋಗುವಾಗ ಪಾರ್ಟಿ ಮಾಡಿ ಹೋಗುತ್ತಿದ್ದರು. ಘಟನೆ ನಡೆದ ಸ್ಥಳದಲ್ಲಿ ಈ ಐವರು ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಬಂಧಿತರಲ್ಲಿ ಕೆಲವರು ಕ್ರಿಮಿನಲ್ ಹಿನ್ನಲೆ ಉಳ್ಳವರು ಇದ್ದಾರೆ. ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು