12:05 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ; ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರು

28/08/2021, 16:47

ಮೈಸೂರು(reporterkarnataka.com): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ನಡೆದ ಎಂಬಿಎ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ  ಕೂಡ ಸೇರಿದ್ದಾನೆ ಎಂಬ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ದೆಹಲಿಯಲ್ಲಿ ಬಸ್ ನಲ್ಲಿ ನಡೆದ ಅತ್ಯಾಚಾರವನ್ನು ಮತ್ತೆ ನೆನಪಿಸುವಂತಿದೆ.

ಡಿಜಿ ಐಜಿಪಿ ಪ್ರವೀಣ್ ಸೂದ್ ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪೊಲೀಸರ 7 ತಂಡ ರಚಿಸಲಾಗಿತ್ತು. ಆರೋಪಿಗಳು ಎಲ್ಲರೂ ತಮಿಳುನಾಡಿನ ತಿರುಪುರ್ ಗೆ ಸೇರಿದವರಾಗಿದ್ದಾರೆ. ಅವರೆಲ್ಲಾ ಕೂಲಿ ಕಾರ್ಮಿಕರರು. ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳಿದ್ದಾರೆ. ಐವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬಾತ 17 ವರ್ಷದ ಬಾಲಾಪರಾಧಿಯಾಗಿದ್ದಾನೆ ಎಂದರು.

ಇವರು ಕೆಲವು ಬಾರಿ ಮೈಸೂರಿಗೆ ಬಂದು ಹೋಗುತ್ತಿದ್ದರು. ವಾಪಸ್ ಹೋಗುವಾಗ ಪಾರ್ಟಿ ಮಾಡಿ ಹೋಗುತ್ತಿದ್ದರು. ಘಟನೆ ನಡೆದ ಸ್ಥಳದಲ್ಲಿ ಈ ಐವರು ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಬಂಧಿತರಲ್ಲಿ ಕೆಲವರು ಕ್ರಿಮಿನಲ್ ಹಿನ್ನಲೆ ಉಳ್ಳವರು ಇದ್ದಾರೆ. ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು