6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು