3:28 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು